Neer Dose Karnataka
Take a fresh look at your lifestyle.

ರುಚಿಯಾದ ಉಡುಪಿ ಶ್ರೀಕೃಷ್ಣ ಮಠದಲ್ಲಿ ಊಟದ ಪ್ರಸಾದದ ತಿಳಿಸಾರು ಮಾಡುವುದು ಹೇಗೆ ಗೊತ್ತೇ??

ನಮಸ್ಕಾರ ಸ್ನೇಹಿತರೇ, ಇಂದು ನಾವು ಉಡುಪಿ ಶ್ರೀಕೃಷ್ಣ ಮಠ ಶೈಲಿಯ ತಿಳಿಸಾರು ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ತಿಳಿಸಾರು ಮಾಡಲು ಬೇಕಾಗುವ ಸಾಮಗ್ರಿಗಳು: ಅರ್ಧ ಬಟ್ಟಲು ತೊಗರಿಬೇಳೆ, ಸ್ವಲ್ಪ ಎಣ್ಣೆ, ಸ್ವಲ್ಪ ಅರಿಶಿಣ ಪುಡಿ, 2 ಚಮಚ ಧನಿಯಾ, ಅರ್ಧ ಚಮಚ ಜೀರಿಗೆ, 7 – 8 ಕಾಳು ಕಾಳುಮೆಣಸು, 10 – 12 ಕಾಳು ಮೆಂತ್ಯ, 6 – 7 ಬ್ಯಾಡಿಗೆ ಮೆಣಸಿನಕಾಯಿ, ಸ್ವಲ್ಪ ಕರಿಬೇವು, ನಿಂಬೆಹಣ್ಣು ಗಾತ್ರದ ಹುಣಸೆಹಣ್ಣು, ಸ್ವಲ್ಪ ಬೆಲ್ಲ, ರುಚಿಗೆ ತಕ್ಕಷ್ಟು ಉಪ್ಪು, ಕಾಲು ಬಟ್ಟಲಿನಷ್ಟು ತೆಂಗಿನಕಾಯಿ ಹಾಲು, ಸ್ವಲ್ಪ ಸಾಸಿವೆ, ಸ್ವಲ್ಪ ಇಂಗು, ಸ್ವಲ್ಪ ಕೊತ್ತಂಬರಿ ಸೊಪ್ಪು.

ತಿಳಿಸಾರು ಮಾಡುವ ವಿಧಾನ: ಮೊದಲಿಗೆ ಗ್ಯಾಸ್ ಮೇಲೆ ಒಂದು ಕುಕ್ಕರ್ ನನ್ನು ಇಟ್ಟು ಅದಕ್ಕೆ 2 – 3 ಬಾರಿ ನೀರಿನಲ್ಲಿ ತೊಳೆದ ತೊಗರಿಬೇಳೆ, ಸ್ವಲ್ಪ ಅರಿಶಿಣ ಪುಡಿ, 1 ಚಮಚ ಎಣ್ಣೆ, ತಿಳಿಸಾರಿಗೆ ಬೇಕಾಗುವಷ್ಟು ನೀರನ್ನು ಹಾಕಿ ಬೇಯಿಸಿಕೊಳ್ಳಿ. ಮತ್ತೊಂದು ಕಡೆ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟು ಅದಕ್ಕೆ 1 ಚಮಚದಷ್ಟು ತೊಗರಿಬೇಳೆಯನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ನಂತರ ಜೀರಿಗೆ, ಕಾಳು ಮೆಣಸು, ಮೆಂತ್ಯವನ್ನು ಹಾಕಿ ಪ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಧನಿಯಾ, ಸ್ವಲ್ಪ ಕರಿಬೇವು, ಬ್ಯಾಡಿಗೆ ಮೆಣಸಿನಕಾಯಿಯನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಂಡು ತಣ್ಣಗಾಗಲು ಬಿಡಿ. ತಣ್ಣಗಾದ ನಂತರ ಮಿಕ್ಸಿ ಜಾರಿಗೆ ಮಾಡಿಕೊಂಡ ಮಿಶ್ರಣವನ್ನು ಹಾಕಿ ನುಣ್ಣಗೆ ಪುಡಿ ಮಾಡಿಕೊಳ್ಳಿ. ನಂತರ ಮತ್ತೊಂದು ಕಡೆ ಗ್ಯಾಸ್ ಮೇಲೆ ಒಂದು ಪಾತ್ರೆಯನ್ನು ಇಟ್ಟು ಅದಕ್ಕೆ ಬೇಳೆ ಕಟ್ಟನ್ನು ಹಾಕಿ ಸ್ವಲ್ಪ ಕುಡಿಯಲು ಬಿಡಿ. ನಂತರ ಇದಕ್ಕೆ ತಿಳಿಸಾರಿಗೆ ಬೇಕಾಗುವಷ್ಟು ಮಾಡಿಕೊಂಡ ಪುಡಿಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ.

ನಂತರ ಇದಕ್ಕೆ ಹುಣಸೆ ಹಣ್ಣಿನ ರಸ, ಸ್ವಲ್ಪ ಬೆಲ್ಲ, ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಕುದಿಯಲು ಬಿಡಿ. ನಂತರ ಇದಕ್ಕೆ ತೆಂಗಿನಕಾಯಿ ಹಾಲನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ಗ್ಯಾಸ್ ಮೇಲೆ ಒಂದು ಸಣ್ಣ ಬಾಣಲೆಯಲ್ಲಿ ಇಟ್ಟುಕೊಂಡು ಅದಕ್ಕೆ 1 ಚಮಚದಷ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಇದಕ್ಕೆ ಸಾಸಿವೆ, 1 ಬ್ಯಾಡಿಗೆಮೆಣಸಿನಕಾಯಿ, ಸ್ವಲ್ಪ ಇಂಗು ಹಾಕಿ ಒಗ್ಗರಣೆ ಮಾಡಿಕೊಂಡು ಕುದಿಯುತ್ತಿರುವ ತಿಳಿಸಾರಿಗೆ ಮಿಕ್ಸ್ ಮಾಡಿಕೊಳ್ಳಿ. ಕೊನೆಯದಾಗಿ ಸಣ್ಣಗೆ ಹಚ್ಚಿದ ಕೊತ್ತಂಬರಿ ಸೊಪ್ಪು ಹಾಕಿ ಮಿಕ್ಸ್ ಮಾಡಿದರೆ ಉಡುಪಿ ಶ್ರೀಕೃಷ್ಣ ಮಠ ಶೈಲಿಯ ತಿಳಿಸಾರು ಸವಿಯಲು ಸಿದ್ಧ

Comments are closed.