Neer Dose Karnataka
Take a fresh look at your lifestyle.

ಇದ್ದಕ್ಕಿದ್ದ ಹಾಗೆ ಅಪ್ಪು ಮನೆಗೆ ಹೋದ ಕಿಚ್ಚ ಸುದೀಪ್, ಅಪ್ಪು ಕುಟುಂಬದ ಜೊತೆ ಮಾತನಾಡಿ ಹೇಳಿದ್ದೇನು ಗೊತ್ತೇ??

ನಮಸ್ಕಾರ ಸ್ನೇಹಿತರೇ ಈಗಾಗಲೆ ನಿಮಗೆಲ್ಲ ತಿಳಿದಿರುವಂತೆ ಪುನೀತ್ ರಾಜಕುಮಾರ್ ಅವರನ್ನು ನಾವು ಕಳೆದುಕೊಂಡು ಬರೋಬ್ಬರಿ 50 ದಿನಗಳಿಗೂ ಅಧಿಕ ಸಮಯ ಕಳೆದು ಹೋಗಿದೆ. ಇಂದಿಗೂ ಕೂಡ ಅವರನ್ನು ನಾವು ಕಳೆದುಕೊಂಡಿದ್ದೇವೆ ಎಂಬ ವಿಚಾರವನ್ನು ಮನಸ್ಸಿನಲ್ಲಿ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಲ್ಲರಿಗೂ ಒಳ್ಳೆಯದನ್ನು ಬಯಸಿ ಒಳ್ಳೆಯವರಾಗಿದ್ದರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಹೀಗೆ ಆಗುತ್ತದೆ ಎಂದರೆ ದೇವರ ಮೇಲೆ ನಂಬಿಕೆಯನ್ನು ಇಡಲು ಸಾಧ್ಯವೇ ಇಲ್ಲ ಎಂಬುದಾಗಿ ಅಭಿಮಾನಿಗಳು ಹೇಳುತ್ತಿದ್ದಾರೆ.

ಪುನೀತ್ ರಾಜಕುಮಾರ್ ರವರು ಜೀವನದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿಕೊಂಡೆ ಬಂದಿದ್ದರು ಆದರೂ ಕೂಡ ಯಾರೊಂದಿಗೂ ಹೇಳಿಕೊಂಡು ಪ್ರಚಾರವನ್ನು ಗಿಟ್ಟಿಸಿಕೊಂಡಿರುವ ಲಿಲ್ಲ. ಇನ್ನು ಪುನೀತ್ ರಾಜಕುಮಾರ್ ಅವರ ಅಗಲಿಕೆಯ ನಂತರ ಅವರ ಮನೆಗೆ ಬಂದು ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಅವರ ಮಗಳಿಗೆ ಹಲವಾರು ಸೆಲೆಬ್ರಿಟಿಗಳು ಬಂದು ಸಮಾಧಾನವನ್ನು ಹೇಳಿ ಹೋಗಿದ್ದಾರೆ. ಈಗ ಆ ಸಾಲಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರು ಕೂಡ ಸೇರಿದ್ದಾರೆ. ನಿಮಗೆಲ್ಲರಿಗೂ ತಿಳಿದಿರುವಂತೆ ಅಪ್ಪು ಹಾಗೂ ಕಿಚ್ಚ ಸಾಕಷ್ಟು ಆತ್ಮೀಯ ಸ್ನೇಹಿತರಾಗಿದ್ದರು.

ಇನ್ನು ಕಿಚ್ಚ ಸುದೀಪ್ ರವರು ಪುನೀತ್ ರಾಜಕುಮಾರ್ ಅವರ ಮನೆಗೆ ಹೋಗಿ ಅಶ್ವಿನಿ ಪುನೀತ್ ರಾಜಕುಮಾರ್ ರವರಿಗೆ ನೀವು ಅಪ್ಪು ಅವರು ನಡೆಸಿಕೊಂಡು ಹೋಗುತ್ತಿದ್ದ ಎಲ್ಲ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಎಲ್ಲರಿಗೂ ಸಂತೋಷ ತಂದಿದೆ. ನಿಮ್ಮೊಂದಿಗೆ ನಾವೆಲ್ಲರೂ ಸೇರಿದಂತೆ ಇಡೀ ಕರ್ನಾಟಕದ ನಿಮ್ಮ ಹಿಂದಿದೆ ಎಂಬುದಾಗಿದೆ ಹೇಳಿಕೊಂಡಿದ್ದಾರೆ. ಇನ್ನು ಮಗಳು ವಂದಿತ ರವರಿಗೆ ನೀವು ಚೆನ್ನಾಗಿ ಓದಿ ಅಪ್ಪನ ಹೆಸರಿಗೆ ಒಳ್ಳೆಯ ಕೀರ್ತಿಯನ್ನು ತರಬೇಕು ಎಂಬುದಾಗಿ ಕೂಡ ಹೇಳಿದ್ದಾರೆ. ಕಿಚ್ಚ ಸುದೀಪ್ ರವರ ಒಳ್ಳೆಯ ವ್ಯಕ್ತಿತ್ವಕ್ಕೆ ನಿಮ್ಮ ಅನಿಸಿಕೆ ಏನೆಂಬುದನ್ನು ಕಾಮೆಂಟ್ ಬಾಕ್ಸ್ನಲ್ಲಿ ನಮ್ಮೊಂದಿಗೆ ಹಂಚಿಕೊಳ್ಳಿ.

Comments are closed.