Neer Dose Karnataka
Take a fresh look at your lifestyle.

ಕಿಚ್ಚನ ವಿರುದ್ಧ ರೊಚ್ಚಿಗೆದ್ದ ಕನ್ನಡ ಅಭಿಮಾನಿಗಳು, ಕನ್ನಡ ಮರೆತು ಕಿಚ್ಚ ಮಾಡಿದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಕನ್ನಡ ಚಿತ್ರರಂಗದಲ್ಲಿ ಅಭಿನಯ ಚಕ್ರವರ್ತಿ ಎಂದು ಬಿರುದು ಪಡೆದು ಕೊಂಡಿರುವ ಸುದೀಪ್ ರವರ ವಿವಾದಗಳಿಂದ ದೂರ ಉಳಿಯುತ್ತಾರೆ. ಯಾವುದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡದೆ ಹಾಗೂ ಯಾವುದೇ ವಿವಾದಗಳಲ್ಲಿ ಪಾಲ್ಗೊಳ್ಳದೆ ತಮ್ಮ 25 ವರ್ಷಗಳ ಸಿನಿಮಾ ಆಚರಣೆಯನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಾರೆ ಎಂದರೆ ತಪ್ಪಾಗಲಾರದು.

ಆದರೆ ಇದೀಗ ಸುದೀಪ್ ರವರು ತನ್ನ ಅನಾರೋಗ್ಯದ ಕುರಿತು ಅಧಿಕೃತವಾಗಿ ತಿಳಿಸುವ ಸಮಯದಲ್ಲಿ ಕನ್ನಡ ಮರೆತಿರುವುದನ್ನು ಕಂಡ ಕನ್ನಡ ಅಭಿಮಾನಿಗಳು ಕಿಚ್ಚ ಸುದೀಪ್ ರವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಸಾಮಾಜಿಕ ಜಾಲತಾಣಗಳಲ್ಲಿ ಮನಬಂದಂತೆ ಕಮೆಂಟ್ಗಳನ್ನು ಮಾಡುತ್ತಿದ್ದಾರೆ. ಯಾಕೆ ಎಂಬುದನ್ನು ತಿಳಿದ ಬಳಿಕ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸುವುದನ್ನು ಮರೆಯಬೇಡಿ.

ಹೌದು ಸ್ನೇಹಿತರೇ ಸುದೀಪ್ ರವರು ತಮ್ಮ ಅನಾರೋಗ್ಯದ ಕುರಿತು ಪ್ರಕಟಣೆ ಮಾಡಿ ನಾನು ಈ ವಾರ ಬಿಗ್ ಬಾಸ್ ನಡೆಸಿಕೊಡಲು ಸಾಧ್ಯವಾಗುತ್ತಿಲ್ಲ ನನ್ನ ಆರೋಗ್ಯ ಸ್ಥಿರವಾಗಿದೆ ಆದರೆ ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಇರುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದು ಕೊಂಡಿದ್ದಾರೆ. ಆದರೆ ಈ ಸಂಪೂರ್ಣ ಮೇಲಿನ ಹೇಳಿಕೆಯನ್ನು ಅವರು ಇಂಗ್ಲೀಷ್ನಲ್ಲಿ ಬರೆದಿದ್ದಾರೆ, ಕನಿಷ್ಠ ಪಕ್ಷ ಇಂಗ್ಲಿಷ್ ಆದ ಮೇಲೆ ಕನ್ನಡದಲ್ಲಿ ಅದೇ ವಾಕ್ಯವನ್ನು ಮತ್ತೆ ಬರೆದಿಲ್ಲ. ಇದು ಕನ್ನಡ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು ಕಿಚ್ಚ ಸುದೀಪ್ ರವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Comments are closed.