Neer Dose Karnataka
Take a fresh look at your lifestyle.

ಸುದೀಪ್ ಗೂ ಬೊಮ್ಮಾಯಿ ರವರಿಗೂ ಇರುವ ಸಂಬಂಧವೇನು, ಮುಖ್ಯಮಂತ್ರಿಯಾದ ತಕ್ಷಣ ಸುದೀಪ್ ಹೇಳಿದ್ದೇನು ಗೊತ್ತೇ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲ ತಿಳಿದಂತೆ ಸುಮಾರು ಎರಡು ವರ್ಷಗಳಿಂದ ಬಿಎಸ್ ಯಡಿಯೂರಪ್ಪನವರು ನೆನ್ನೆಯಷ್ಟೇ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಈ ಸ್ಥಾನಕ್ಕೆ ಮುಂದೆ ಯಾರು ಆಯ್ಕೆಯಾಗುತ್ತಾರೆ ಎಂಬುದು ಹಲವಾರು ಗೊಂದಲಗಳಿಗೆ ಕಾರಣವಾಗಿತ್ತು. ಆದರೆ ನಿನ್ನೆ ಈ ಗೊಂದಲಕ್ಕೆ ಪೂರ್ಣವಿರಾಮ ಬಿದ್ದಿದ್ದು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದರು.

ಇಂದು ರಾಜ್ಯಪಾಲರಿಂದ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಮಾಡಿದ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಇನ್ನು ರಾಜ್ಯದ ನವ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಹಲವಾರು ಕ್ಷೇತ್ರದ ಗಣ್ಯರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದನೆಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಲ್ಲಿಸಿದ್ದರು. ಬಸವರಾಜ್ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿ ಆಗಿರುವುದಕ್ಕೆ ವ್ಯಾಪಕವಾಗಿ ಜನಮನ್ನಣೆ ಗಳಿಸಿದ್ದು ಎಲ್ಲರಿಂದಲೂ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಇನ್ನು ಬಸವರಾಜ್ ಬೊಮ್ಮಾಯಿ ರವರಿಗೆ ಕನ್ನಡ ಚಿತ್ರರಂಗದ ಖ್ಯಾತ ನಟನಾಗಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರು ಕೂಡ ಅಭಿನಂದನೆ ಸಲ್ಲಿಸಿದ್ದಾರೆ.

ಹೌದು ಸ್ನೇಹಿತರೆ ಬಸವರಾಜ್ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ರುವುದಕ್ಕೆ ಕಿಚ್ಚ ಸುದೀಪ್ ರವರು ಅಭಿನಂದನೆ ಸಲ್ಲಿಸುತ್ತಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ, ನನ್ನ ಸಿನಿ ಜೀವನದ ಪ್ರಾರಂಭಿಕ ದಿನಗಳಿಂದಲೂ ನನ್ನ ಬೆಂಬಲವಾಗಿ ನಿಂತಿದ್ದೀರಿ ನೀವು. ನಿಮ್ಮ ಸರಳತೆಯನ್ನು ನಾನು ಹತ್ತಿರದಿಂದ ಬಲ್ಲೆ ನಿಮಗೆ ಅಭಿನಂದನೆಗಳು ಮಾಮ, ಎಂಬುದಾಗಿ ಕಿಚ್ಚ ಸುದೀಪ್ ರವರು ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು ಸಲ್ಲಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರನ್ನು ಮಾಮ ಎಂಬುದಾಗಿ ಸಂಬೋಧಿಸಿದರುವುದರಿಂದ ಕಿಚ್ಚ ಸುದೀಪ್ ರವರು ಬಸವರಾಜ್ ಬೊಮ್ಮಾಯಿ ಅವರಿಗೆ ತುಂಬಾ ಹತ್ತಿರದ ಸಂಬಂಧವನ್ನು ಹೊಂದಿದ್ದಾರೆ ಎಂಬುದು ತಿಳಿದುಬರುತ್ತದೆ. ಇನ್ನು ಕಿಚ್ಚ ಸುದೀಪ್ ರವರು ವಿಕ್ರಾಂತ್ ರೋಣ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ3 ಕೂಡ ಬಿಡುಗಡೆಗೆ ಸಿದ್ಧವಾಗಿದೆ. ಈ ಕುಡಿದಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಬಾಕ್ಸ್ ಅಲ್ಲಿ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Comments are closed.