Neer Dose Karnataka
Take a fresh look at your lifestyle.

ಸುದೀಪ್, ದರ್ಶನ್ ನಂತರ ರವಿಚಂದ್ರನ್ ಕಷ್ಟ ನೋಡಲಾರದೇ ಮನೆಗೆ ಬಂದು ಯಶ್ ರಾಧಿಕಾ ಪಂಡಿತ್ ಮಾಡಿದ್ದೇನು ಗೊತ್ತೇ?? ಶೇಕ್ ಆದ ಚಿತ್ರರಂಗ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಈಗ ಬಹಳ ಕಷ್ಟದಲ್ಲಿದ್ದಾರೆ ಎನ್ನುವ ವಿಷಯ ನಮಗೆಲ್ಲ ಗೊತ್ತಿದೆ. ಇತ್ತೀಚೆಗೆ ರವಿಚಂದ್ರನ್ ಅವರು ರಾಜಾಜಿನಗರದಲ್ಲಿರುವ ತಮ್ಮ ಮನೆಯನ್ನು ಖಾಲಿ ಮಾಡಿ, ಮಗ ಸೊಸೆ ಮತ್ತು ಕುಟುಂಬದ ಜೊತೆಗೆ ಹೊಸ ಮನೆಗೆ ಹೋಗಿದ್ದಾರೆ. ರವಿಚಂದ್ರನ್ ಅವರು ಇಂದು ತಮ್ಮ ಬಳಿ ಇರುವ ಎಲ್ಲವನ್ನು ಕಳೆದುಕೊಂಡು, ಬಹಳ ಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ನೋವುಗಳ ರವಿಚಂದ್ರನ್ ಅವರು ಜೀಕನ್ನಡ ವಾಹಿನಿಯ ಕಾರ್ಯಕ್ರಮದಲ್ಲಿ, ಬಹಳ ನೋವಿನಿಂದ ಹೇಳಿಕೊಂಡರು. ಅದನ್ನು ನೋಡಿ ಎಲ್ಲರೂ ಕಣ್ಣೀರು ಹಾಕಿದ್ದರು.

ಜನರಿಗಾಗಿ ಸಿನಿಮಾ ಮಾಡುತ್ತಿದ್ದೀನಿ, ಆದರೆ ಜನರು ನನ್ನ ಸಿನಿಮಾವನ್ನು ಇಷ್ಟಪಡುತ್ತಿಲ್ಲ. ಜನರನ್ನ ಮೆಚ್ಚಿಸೋದಕ್ಕೆ ಆಗಲಿಲ್ಲ ಅಂತ ಬೇಸರ ನನಗಿದೆ. ನಾನು ಮತ್ತೆ ಒಳ್ಳೆಯ ಸಿನಿಮಾ ಕೊಡುವ ಮೂಲಕ ವಾಪಸ್ ಬರ್ತೀನಿ. ಜನರು ನನ್ನ ಸಿನಿಮಾ ನೋಡುವ ಹಾಗೆ ಮಾಡ್ತೀನಿ ಎಂದು ಬಹಳ ನೋವಿನಿಂದ ಹೇಳಿಕೊಂಡಿದ್ದರು. ತಿಳಿದುಬಂದಿರುವ ಮಾಹಿತಿ ಪ್ರಕಾರ, ರವಿ ಬೋಪಣ್ಣ ಸಿನಿಮಾ ಸೋಲಿನಿಂದ ರವಿಚಂದ್ರನ್ ಅವರು ತಾವು ಮಾಡಿದ ಸಾಲ ತೀರಿಸಲಾಗದೆ Audi ಕಾರ್ ಮಾರಾಟ ಮಾಡಿದ್ದಾರೆ ಎಂದು ಸಹ ತಿಳಿದುಬಂದಿದೆ.

ಈ ರೀತಿ ರವಿಚಂದ್ರನ್ ಅವರು ಬಹಳ ಕಷ್ಟದಲ್ಲಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಖ್ಯಾತ ನಟರಾದ ದರ್ಶನ್ ಅವರು, ಸುದೀಪ್ ಅವರು ರವಿಚಂದ್ರನ್ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದ್ದರು. ಇದೀಗ ರಾಕಿಂಗ್ ಸ್ಟಾರ್ ಯಶ್ ಮತ್ತು ಅವರ ಪತ್ನಿ ರಾಧಿಕಾ ಪಂಡಿತ್ ಅವರು ರವಿಚಂದ್ರನ್ ಅವರ ಮನೆಗೆ ಭೇಟಿ ನೀಡಿ, ಅವರೊಡನೆ ಸ್ವಲ್ಪ ಸಮಯ ಕಳೆದು ಧೈರ್ಯ ಹೇಳಿದ್ದಾರೆ. “ನನ್ನಂತಹ ಹಲವು ಜನರಿಗೆ ನೀವು ಸ್ಪೂರ್ತಿ, ನಾವು ನಿಮ್ಮ ಸಿನಿಮಾಗಳನ್ನ ನೋಡಿಕೊಂಡು ಬೆಳೆದ್ವಿ. ನಿಮ್ಮ ಕಷ್ಟದ ಸಮಯದಲ್ಲಿ ಇಡೀ ಕರ್ನಾಟಕದ ಜನತೆ ನಿಮ್ಮ ಜೊತೆಗಿದೆ. ನಾನು ಹಾಗು ಇಡೀ ಕನ್ನಡ ಚಿತ್ರರಂಗ ನಿಮ್ಮ ಜೊತೆಗೆ ಸದಾ ಇರುತ್ತದೆ..” ಎಂದು ಇಬ್ಬರು ಧೈರ್ಯ ಹೇಳಿದ್ದಾರೆ.

Comments are closed.