ರುಕ್ಮಿಣಿ ವಸಂತ್ ಒಪ್ಪದ ಉಪ್ಪಿ ಚಿತ್ರಕ್ಕೆ ಕೊನೆಯದಾಗಿ ಆಯ್ಕೆಯಾದ ಖ್ಯಾತ ನಟಿ ಯಾರು ಗೊತ್ತೆ??

ನಮಸ್ಕಾರ ಸ್ನೇಹಿತರೇ ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ನಿರ್ದೇಶಕ ಶಶಾಂಕ್ ರಾವರಿಬ್ಬರು ಒಟ್ಟಾಗಿ ಸಿನಿಮಾ ಮಾಡುತ್ತಿರುವ ಸುದ್ದಿ ಎಲ್ಲರಿಗೂ ತಿಳಿದೇ ಇದೆ. ಉಪೇಂದ್ರ ಅವರು ತಮ್ಮ ಜೀವನದಲ್ಲಿ ಮಾಡಿದ ರೀತಿಯ ಪಾತ್ರವನ್ನು ಈ ಸಿನಿಮಾದಲ್ಲಿ ಮಾಡುತ್ತಿದ್ದಾರೆ.

ಆದ ಕಾರಣ ಅಭಿಮಾನಿಗಳಲ್ಲಿ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದ್ದು ಉಪೇಂದ್ರ ಹಾಗೂ ಶಶಾಂಕ್ ರವರ ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ಕಬ್ಜಾ ಚಿತ್ರಕ್ಕಾಗಿ ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ, ಎಲ್ಲಾ ಅಂದು ಕೊಂಡಂತೆ ಆಗಿದ್ದರೇ ಇಷ್ಟೊತ್ತಿಗಾಗಲೇ ಈ ಸಿನಿಮಾ ಬಿಡುಗಡೆಯಾಗ ಬೇಕಾಗಿತ್ತು ಆದರೆ ಕೊರೊನ ಕಾರಣದಿಂದ ಮುಂದೆ ಹೋಗಿ ಇದೇ ಮುಂದಿನ ಏಪ್ರಿಲ್ನಲ್ಲಿ ಸಿನಿಮಾ ಸೆಟ್ಟೇರಲಿದೆ.

ಇನ್ನು ಈ ಚಿತ್ರಕ್ಕೆ ನಾಯಕಿ ಯಾರು ಎಂಬುದರ ಕುರಿತು ಕೂಡ ಚರ್ಚೆ ನಡೆಯುತ್ತಿದ್ದು ರುಕ್ಮಿಣಿ ವಸಂತ್ ರವರು ಕಬ್ಜಾ ಚಿತ್ರಕ್ಕೆ ನಟಿಯಾಗಿ ಆಯ್ಕೆಯಾಗಿದ್ದರು, ಆದರೆ ರುಕ್ಮಿಣಿ ವಸಂತ್ ರವರು ರಕ್ಷಿತ್ ಶೆಟ್ಟಿ ರವರ ಜೊತೆ ಸಪ್ತ ಸಾಗರದಾಚೆ ಎಲ್ಲೊ‌ ಎಂಬ ಸಿನಿಮಾದಲ್ಲಿ ಬಿಸಿಯಾಗಿರುವ ಕಾರಣ ಉಪೇಂದ್ರ ರವರ ಚಿತ್ರವನ್ನು ಮಾಡಲು ನಿರಾಕರಿಸಿದ್ದಾರೆ. ಇದರಿಂದ ಕೊನೆಯದಾಗಿ ಕನ್ನಡ ಹಾಗೂ ತೆಲುಗಿನಲ್ಲಿ ಪ್ರತ್ಯೇಕ ಅಭಿಮಾನಿ ಬಳಗವನ್ನು ಹೊಂದಿರುವ ಖ್ಯಾತ ನಟಿ ಹರಿಪ್ರಿಯಾ ರವರು ಕಬ್ಜಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂಬುದು ತಿಳಿದು ಬಂದಿದೆ. ಈ ಕುರಿತು ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸುವುದನ್ನು ಮರೆಯ ಬೇಡಿ.